You are hereಅಂಬೇಡ್ಕರ್
ಅಂಬೇಡ್ಕರ್
ನಾಡನಡುವಿನಿಂದ ಸಿಡಿದ
ನೋವಿನ ಕೂಗೆ
ಆಕಾಶದ ಅಗಲಕ್ಕೂ
ನಿಂತ ಆಲವೆ
ಕೋಟಿ ಕೋಟಿ ಕಪ್ಪು ಜನರ
ಮೊಟ್ಟ ಮೊದಲ ಮಾತೆ
ನೀರಿನಾಚೆ ಮೋಡದಾಚೆ
ಮೊಳಗಿದಂಥ ಘೋಷವೆ
ಬಾಳಿನಲ್ಲೆ ಕಂಡುಕೊಂಡೆ
ಹೋರಾಟದ ದಾರಿಯ
ಕರೆದು ಕರೆದು ತೋರಿಸಿದೆ
ಮಹಾಮನೆಯ ಬಿರುಕನು
ಜಾತಿಯನ್ನು ಹೂತುಬಿಡಲು
ಲಕ್ಷ ಲಕ್ಷ ಜನರನು
ಕಟ್ಟಿ ಕ್ರಿಯಾರಂಗಕಿಳಿದ
ಸ್ವಾಭಿಮಾನ ಸಮುದ್ರ
ಮಹರಾಷ್ಟ್ರದ ಮಣ್ಣಿನಲ್ಲಿ
ಮೂಡಿಬಂದ ಗುಡುಗುಸಿಡಿಲೆ
ಮಳೆಯನೇಕೆ ತಾರಲಿಲ್ಲ
ಮಿಂಚು ಮಾಯೆ ಅಷ್ಟೆಯ?
-
ಕವಿ - ಡಾ. ಸಿದ್ಧಲಿಂಗಯ್ಯ
ಹಕ್ಕುಗಳು: ಲೇಖಕರದು
- Login or register to post comments
- Email this page